ಡಾ. ಬಿ.ಆರ್.ಅಂಬೇಡ್ಕರ್ ಬ್ರಾಹ್ಮಣ ಎಂದ ಗುಜರಾತ್ ವಿಧಾನಸಭಾ ಸ್ಪೀಕರ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಬ್ರಾಹ್ಮಣ ಎಂದು ಗುಜರಾತ್ ರಾಜ್ಯ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿಯವರು ಸೋಮವಾರ ಹೇಳಿದ್ದಾರೆ...
ಗುಜರಾತ್ ರಾಜ್ಯ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ
ಗುಜರಾತ್ ರಾಜ್ಯ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ
ಗಾಂಧಿನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಬ್ರಾಹ್ಮಣ ಎಂದು ಗುಜರಾತ್ ರಾಜ್ಯ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿಯವರು ಸೋಮವಾರ ಹೇಳಿದ್ದಾರೆ. 
ಗಾಂಧಿನಗರದಲ್ಲಿ ನಡೆದ ಮೇಘಾ ಬ್ರಾಹ್ಮಣ ಸಮಾವೇಶದಲ್ಲಿ ಮಾತನಾಡಿರುವ ರಾಜೇಂದ್ರ ತ್ರಿವೇದಿಯವರು, ಡಾ.ಬಿ.ಆರ್, ಅಂಬೇಡ್ಕರ್ ಅವರನ್ನೂ ಕೂಡ ಬ್ರಾಹ್ಮಣರೆಂದು ಕರೆಯಲು ನಾನು ಹಿಂಜರಿಯುವುದಿಲ್ಲ. ತಿಳಿದ ವ್ಯಕ್ತಿಯನ್ನು ಬ್ರಾಹ್ಮಣನೆಂದು ಕರೆಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ. 
ತಿಳಿದ ವ್ಯಕ್ತಿಯನ್ನು ಬ್ರಾಹ್ಮಣನೆಂದು ಕರೆಯುವುದರಲ್ಲಿ ಯಾವ ತಪ್ಪೂ ಇಲ್ಲ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೂ ಕೂಡ ನಾನು ಬ್ರಾಹ್ಮಣನೆಂದು ಕರೆಯುತ್ತೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com