ಇನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಕವಿಂದರ್ ಗುಪ್ತಾ ಪ್ರತಿಕ್ರಿಯಿಸಿ, ಅಭಿವೃದ್ಧಿ ಪರ ಕೆಲಸ ಮಾಡುವುದೇ ನಮ್ಮ ಆದ್ಯತೆ ಎಂದಿದ್ದಾರೆ. ಪಕ್ಷವು ಮೂರು ವರ್ಷಗಳ ನಂತರ ಬದವಾವಣೆಯನ್ನು ತರಲು ನನಗೆ ಜವಾಬ್ದಾರಿಯನ್ನು ನೀಡಿದೆ. ಜಮ್ಮು, ಕಾಶ್ಮೀರ್ ಮತ್ತು ಲಡಕ್ನ ಜನರ ನಿರೀಕ್ಷೆಗಳನ್ನು ಈಡೇರಿಸವತ್ತ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವಿನ ಅಸಾಮಾನ್ಯ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದ ಜನತೆ ಎರಡೂ ಪಕ್ಷಗಳನ್ನು ಆಯ್ಕೆ ಮಾಡಿದ್ದಾರೆ. ಜನರ ಆದೇಶ ಪಾಲನೆಗಾಗಿ ಎರಡೂ ಪಕ್ಷಗಳು ಸೇರಿ ಸರ್ಕಾರ ರಚಿಸಲಾಗಿದ್ದು, ಉತ್ತಮ ಆಡಳಿತ ನೀಡಲಾಗುತ್ತದೆ ಎಂದರು.