ಕಳೆದ ತಿಂಗಳಷ್ಟೇ ತ್ರಿಪುರಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ದೇವ್ ಹಲವು ವಿವಾದಾಸ್ಪದ ಹೇಳಿಕೆ ನೀಡಿ ಇದೀಗ ಚರ್ಚೆಗೆ ಗುರಿಯಾಗಿದ್ದಾರೆ. ದೇವ್ ನೀಡಿರುವ ಹೇಳಿಕೆಯಿಂದ ಹಲವು ಹಿರಿಯ ನಾಯಕರು ಮುಜುಗುರಗೊಂಡಿದ್ದಾರೆ. ದೇವ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಲಿಚ್ಛಿಸಿದ್ದು, ಅವರೊಂದಿಗೆ ಚರ್ಚೆ ನಡೆಸಿ ತಿಳಿಹೇಳುವ ಸಾಧ್ಯತೆ ಇದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.