ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಕೀರ್ತಿ ಆಜಾದ್, ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಮಮತಾ ಬ್ಯಾನರ್ಜಿ ಅವರ ಶ್ರಮ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ ಎನ್ ಆರ್ ಸಿ ವಿರುದ್ಧ ಧ್ವನಿ ಎತ್ತುವಂತೆ ಶತೃಘ್ನ ಸಿನ್ಹಾ, ಯಶ್ವಂತ್ ಸಿನ್ಹಾ ಅವರಲ್ಲಿ ಮನವಿ ಮಾಡಿರುವುದಾಗಿ ಹೇಳಿದ್ದಾರೆ.