ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪ್ರಕ್ರಿಯೆ ರಾಜಕೀಯ ಪ್ರೇರಿತ ಮತ್ತು ಜನರನ್ನು ಒಡೆಯುವ ತಂತ್ರ. ಕೇಸರಿ ಪಕ್ಷ ದೇಶ ಒಡೆಯಲು ಯತ್ನಿಸುತ್ತಿದೆ. ಆದರೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಎನ್ ಆರ್ ಸಿ ಪ್ರಕ್ರಿಯೆ ರಾಜಕೀಯ ಪ್ರೇರಿತವಾಗಿದ್ದು, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಹಿಂದೆ, ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಒಂದೇಯಾಗಿತ್ತು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. 1971ರ ಮಾರ್ಚ್ ವರೆಗೆ ಭಾರತಕ್ಕೆ ಬಂದವರೆಲ್ಲ ಭಾರತೀಯರು ಎಂದು ಹೇಳಿದ್ದರು.