ಕೋಲ್ಕತ್ತಾ: ".ಅಸ್ಸಾಂ ನಲ್ಲಿ ನಡೆಯುತ್ತಿರುವ ದೌರ್ಜನ್ಯವು ಕೇವಲ ಖಂಡನಾರ್ಹವಷ್ಟೇ ಆಗಿಲ್ಲ. ಇದು ಅಂತ್ಯದ ಆರಂಭವಾಗಿದೆ ಎಂದು ನಾನು ಭಾವಿಸುತ್ತೇನೆ. ಬಿಜೆಪಿಗರು ನಿರಾಶೆಗೊಂಡಿದ್ದಾರೆ. ಅವರು ರಾಜಕೀಯವಾಗಿ ಸೊತಿದ್ದಾರೆ ಹಾಗಾಗಿ ಈ ಪರಿದಾಷ್ಟೆ ಮೆರೆಯುತ್ತಿದ್ದಾರೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು. ಪಶ್ಚಿಮ ಬಂಗಾಳದ ಟಿಎಂಸಿ ಸಂಸದರನ್ನು ಸಿಲ್ಚಾರ್ ವಿಮಾನ ನಿಲ್ದಾಣದಲ್ಲಿ ಬಂಧಿಸುವ ಪ್ರಯತ್ನ ನಡೆದ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.