ಮೂಲಗಳ ಪ್ರಕಾರ ಎನ್ಆರ್ ಸಿ ವಿಚಾರಕ್ಕೆ ಸಂಬಂಧಿಸಿದಂತೆ ತೃಣಮೂಲಕ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಅಸ್ಸಾಂನಲ್ಲಿ ಎನ್ ಆರ್ ಸಿ ವಿಚಾರ ಬೂದಿ ಮುಚ್ಚಿದ ಕೆಂಡಂತಿದ್ದು, ಪ್ರಸ್ತುತ ಆಗಮಿಸಿರುವ ಟಿಎಂಸಿ ನಾಯಕರಿಂದ ಮತ್ತೆ ಪ್ರಚೋದನಕಾರಿಯಾಗಬಹುದು ಎಂಬ ಕಾರಣಕ್ಕೆ ಪೊಲೀಸರು ಟಿಎಂಸಿ ನಾಯಕರನ್ನು ತಡೆದಿದ್ದಾರೆ ಎನ್ನಲಾಗಿದೆ.