ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ವಾದ ಮಂಡಿಸಿದ್ದು, ಸಾವಿರಾರು ವರ್ಷಗಳಿಂದ ಎಸ್ ಸಿ/ಎಸ್ ಟಿಗಳಿಗೆ ವಂಚನೆಯಾಗಿದ್ದು, ಎಸ್ ಸಿ/ ಎಸ್ ಟಿ ನೌಕರರು ಹಿಂದುಳಿದವರೆಂದು ಭಾವಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಮುಂಬಡ್ತಿಯಲ್ಲಿ ಶೇ.22.5 ರಷ್ಟು ಮೀಸಲು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.