ಅಲ್ಲದೆ ಮೋದಿ ಮತ್ತು ಅಮಿತ್ ಶಾ ಅವರನ್ನು ಮಣಿಸಲೆಂದೇ ತಲೆ ಎತ್ತಿ ನಿಂತಿರುವ ಮಹಾ ಘಟ್ ಬಂಧನ್ ಮೈತ್ರಿಕೂಟದಲ್ಲೂ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಪಸ್ಪರ ಎದ್ದಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಪಕ್ಷದ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್ ಮತ್ತು ಆರ್ ಜೆಡಿಯ ಲಾಲು ಪ್ರಸಾದ್ ಯಾದವ್, ಜೆಡಿಯು ಪಕ್ಷದ ಶರದ್ ಯಾದವ್ ಅವರ ಹೆಸರುಗಳು ಬಲವಾಗಿ ಕೇಳಿಬರುತ್ತಿದೆ.