ಇನ್ನು ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂನಬಿ ಆಜಾದ್ ಅವರು, ನಿಷ್ಠಾವಂತ ಭಾರತೀಯರನ್ನು ಯಾವುದೇ ಕಾರಣಕ್ಕೂ ಭಾರತದಿಂದ ಹೊರಗಿಡಬಾರದು ಎಂಬುದು ಕಾಂಗ್ರೆಸ್ ನಿಲುವಾಗಿದ್ದು, ಯಾವುದೇ ಕಾರಣಕ್ಕೂ ಎನ್ ಆರ್ ಸಿ ವಿಚಾರದಲ್ಲಿ ರಾಜಕೀಯ ಬೇಡ. ಎನ್ಆರ್ ಸಿಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ ಅಂತಿಮ ಪಟ್ಟಿ ಬಿಡುಗಡೆ ಸಂದರ್ಭದಲ್ಲಾಗುವ ವೈಪರೀತ್ಯಗಳ ಕುರಿತು ಕಟ್ಟೆಚ್ಚರ ವಹಿಸಬೇಕು ಎಂದು ಅವರು ರಾಜ್ಯಸಭೆಯಲ್ಲಿ ಹೇಳಿದರು.