ನಕ್ಸಲರಿಗೆ ಭಯಪಟ್ಟು ರಸ್ತೆ ನಿರ್ಮಾಣ ಕಾಮಗಾರಿಯ ಯೋಜನೆಯನ್ನು ಕೈಗೆತ್ತಿಕೊಳ್ಳುವುದಕ್ಕೆ ಯಾವುದೇ ಖಾಸಗಿ ಗುತ್ತಿಗೆದಾರನೂ ಮುಂದಾಗಲಿಲ್ಲ, ಸಿಆರ್ ಪಿಎಫ್ ಕೈಗೆತ್ತಿಕೊಂಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪೆರ್ಮಪಾರಾದಲ್ಲಿ ಕಲ್ವರ್ಟ್ ನ್ನು ಮಾತ್ರ ನಿರ್ಮಾಣ ಮಾಡಬೇಕಿದೆ. ಮುಂಗಾರಿನಿಂದ ಕಾಮಗಾರಿ ನಿಧಾನಗತಿಯಲ್ಲಿದ್ದು, ಶೀಘ್ರವೇ ಪೂರ್ಣಗೊಳಿಸಲಾಗುತ್ತದೆ ಎಂದು ಸಿಆರ್ ಪಿಎಫ್ ಇನ್ಸ್ಪೆಕ್ಟರ್ ಜನರಲ್ ಸಂಜಯ್ ಅರೋರ ಮಾಹಿತಿ ನೀಡಿದ್ದಾರೆ.