ಹಿಂದುಳಿದ ವರ್ಗಗಳಿಗಿರುವ ಮೀಸಲಾತಿ ಇಂದು ರಾಜಕೀಯ ಇಚ್ಛಾಶಕ್ತಿಯಾಗಿ ಮಾರ್ಪಟ್ಟಿವೆ. ಇದು ಪ್ರಮುಖ ಸಮಸ್ಯೆಯಾಗಿದೆ. ನಾನು ಹಿಂದುಳಿದ ವ್ಯಕ್ತಿಯೆಂದು ಎಲ್ಲರೂ ಹೇಳುತ್ತಾರೆ. ಬಿಹಾರ, ಉತ್ತರಪ್ರದೇಶಗಳಲ್ಲಿ ಬ್ರಾಹ್ಮಣರು ಪ್ರಬಲರಾಗಿದ್ದು, ರಾಜಕೀಯದಲ್ಲಿ ಹಿಡಿತ ಸಾಧಿಸಿದ್ದಾರೆ. ಅಲ್ಲಿ ಅವರೂ ತಾವು ಹಿಂದುಳಿದವರು ಎಂದು ಹೇಳಿಕೊಳ್ಳುತ್ತಿದ್ದಾರೆ. ಹಾಗಾಗಿ ಬಡವರು ಬಡವರಾಗಿಯೇ ಉಳಿದಿದ್ದಾರೆ. ಅವರಿಗೆ ಯಾವುದೇ ಜಾತಿ, ಮತ ಅಥವಾ ಭಾಷೆ ಇಲ್ಲ. ಧರ್ಮ ಯಾವುದಾದರೂ ಸರಿ ಎಲ್ಲಾ ಸಮುದಾಯಗಳಲ್ಲಿ ತೊಡಲು ಬಟ್ಟೆ ಇಲ್ಲದವರು, ತಿನ್ನಲು ಆಹಾರ ಇಲ್ಲದವರದ್ದೊಂದು ವರ್ಗ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.