ನವದೆಹಲಿ: ಬಿಹಾರ ರಾಜ್ಯದ ಮುಜಾಫರ್ ಪುರ್ ಸೇರಿದಂತೆ ಹಲವು ವಸತಿನಿಲಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಖಂಡಿಸಿ ಜಂಥರ್ ಮಂಥರ್ ಬಳಿ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ರಾಜ್ಯಸಭಾ ಸದಸ್ಯ ಶರದ್ ಯಾದವ್ , ಎಡಪಕ್ಷದ ನಾಯಕರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿನ ಮಹಿಳೆಯರ ರಕ್ಷಣೆ ನಮ್ಮ ನಿಲುವು ಆಗಿದೆ. ಅವರ ರಕ್ಷಣೆಗಾಗಿಯೇ ಇಲ್ಲಿ ನಾವೆಲ್ಲೂ ಸೇರಿದ್ದೇವೆ. ಒಂದು ವೇಳೆ ನಿತಿಶ್ ಕುಮಾರ್ ಅವರಿಗೆ ನಾಚಿಕೆಯಾಗಿದ್ದರೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.