ಶನಿವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಅವರು ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಉಭಯ ನಾಯಕರು ಚುನಾವಣಾ ಪೂರ್ವ ಮೈತ್ರಿ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಂತೆಯೇ ಚುನಾವಣಾ ಪೂರ್ವ ಮೈತ್ರಿಯಿಂದ ತಮ್ಮ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ಕಡಿಮೆ ಇದ್ದು, ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯಾಬಲ ಕಡಿಮೆ ಕಂಡುಬಂದಲ್ಲಿ ಮೈತ್ರಿ ಮಾಡಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಚಂದ್ರಶೇಖರ್ ರಾವ್ ಹೇಳಿದ್ದಾರೆ ಎನ್ನಲಾಗಿದೆ.