ಹರಿವಂಶ್
ದೇಶ
ರಾಜ್ಯಸಭೆ ಉಪ ಸಭಾಪತಿ ಚುನಾವಣೆ: ಜೆಡಿಯುನ ಹರಿವಂಶ್ ಎನ್ಡಿಎ ಅಭ್ಯರ್ಥಿ?
ಆಗಸ್ಟ್ 9ರಂದು ನಡೆಲಿರುವ ರಾಜ್ಯಸಭೆ ಉಪ ಸಭಾಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಜೆಡಿಯು ಸಂಸದ...
ನವದೆಹಲಿ: ಆಗಸ್ಟ್ 9ರಂದು ನಡೆಲಿರುವ ರಾಜ್ಯಸಭೆ ಉಪ ಸಭಾಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಜೆಡಿಯು ಸಂಸದ ಹರಿವಂಶ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ.
ರಾಜ್ಯಸಭೆ ಉಪಾ ಸಭಾಪತಿ ಸ್ಥಾನಕ್ಕೆ ಆಗಸ್ಟ್ 9ರಂದು ಬೆಳಗ್ಗೆ 11 ಗಂಟೆಗೆ ಚುನಾವಣೆ ನಡೆಯಲಿದೆ ಎಂದು ಸಭಾಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರು ಇಂದು ಪ್ರಕಟಿಸಿದ್ದಾರೆ.
ಇದಕ್ಕೆ ಮೊದಲು, ಉಪ ಸಭಾಧ್ಯಕ್ಷರನ್ನು ಒಮ್ಮತದಿಂದ ಆಯ್ಕೆ ಮಾಡಬಹುದು ಎಂದು ನಾಯ್ಡು ಸಲಹೆ ನೀಡಿದ್ದರು. ಆದರೆ ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇರುವುದರಿಂದ ಚುನಾವಣೆ ಅನಿವಾರ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
ನಾಮಪತ್ರ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನವಾಗಿದೆ.
ರಾಜ್ಯಸಭಾ ಉಪ ಸಭಾಪತಿಯಾಗಿದ್ದ ಪಿಜೆ ಕುರಿಯನ್ ಅವರು ಜುಲೈ 1 ರಂದು ನಿವೃತ್ತಿಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಈಗ ಚುನಾವಣೆ ನಡೆಯುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ