2009ರಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಂತರ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದ್ದು, 'ರಸ್ತೆ ರಹದಾರಿ (ಪರ್ಮಿಟ್) ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ವಾಹನದಿಂದ ಅಪಘಾತ ಸಂಭವಿಸಿದರೂ, ವಿಮಾ ಕಂಪನಿಯೇ ಸಂತ್ರಸ್ತರಿಗೆ ಪರಿಹಾರ ಪಾವತಿ ಮಾಡಬೇಕು. ನಂತರ ಆ ಮೊತ್ತವನ್ನು ವಾಹನದ ಮಾಲೀಕರಿಂದ ವಸೂಲಿ ಮಾಡಬೇಕು' ಎಂದು ಹೇಳಿದೆ.