ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ನಿರಾಕರಣೆ : ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತಿಮ ಸಂಸ್ಕಾರಕ್ಕೆ ಸ್ಥಳ ನೀಡಲು ತಮಿಳುನಾಡು ಎಐಎಡಿಎಂಕೆ ಸರ್ಕಾರ ನಿರಾಕರಿಸಿದ್ದು, ಏಲ್ಲಿ ಅಂತ್ಯಸಂಸ್ಕಾರ ಮಾಡಬೇಕೆಂಬ ಬಗ್ಗೆ ಇದೀಗ ತಮಿಳುನಾಡಿನಲ್ಲಿ ರಾಜಕೀಯ ಆರಂಭವಾಗಿದೆ.
ಕರುಣಾನಿಧಿ
ಕರುಣಾನಿಧಿ
Updated on

ಚೆನ್ನೈ : ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತಿಮ ಸಂಸ್ಕಾರಕ್ಕೆ  ಸ್ಥಳ ನೀಡಲು ತಮಿಳುನಾಡು ಎಐಎಡಿಎಂಕೆ   ಸರ್ಕಾರ ನಿರಾಕರಿಸಿದ್ದು, ಏಲ್ಲಿ ಅಂತ್ಯಸಂಸ್ಕಾರ ಮಾಡಬೇಕೆಂಬ ಬಗ್ಗೆ ಇದೀಗ ತಮಿಳುನಾಡಿನಲ್ಲಿ ರಾಜಕೀಯ ಆರಂಭವಾಗಿದೆ.

ಮರೀನಾ ಬೀಚ್ ಬದಲಿಗೆ  ಗಿಂಡಿ ಪ್ರದೇಶದಲ್ಲಿ  ಅಂತ್ಯಸಂಸ್ಕಾರ ಮಾಡಲು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಸರ್ಕಾರ ಜಾಗ ನೀಡಿದೆ. ಮರೀನಾ ಬೀಚ್ ನಲ್ಲಿನ  ಸ್ಮಾರಕಗಳ ಸಂಬಂದ ಹಲವು ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿದ್ದು,  ಗಾಂಧಿ ಮಂಟಪದ ಬಳಿ   ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ಸ್ಥಳವಕಾಶ ಮಾಡಿಕೊಡುವುದಾಗಿ ಸರ್ಕಾರದ ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ.

ಎಐಎಡಿಎಂಕೆ ಸಂಸ್ಥಾಪಕ ಎಂ ಜಿ ರಾಮಚಂದ್ರನ್, ಮಾಜಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಮತ್ತು ಡಿಎಂಕೆ ಸ್ಥಾಪಕ ಅಣ್ಣಾದೊರೈ ಅವರನ್ನು ಮರೀನಾ ಬೀಚ್ ನಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಈಗ ಅವರಷ್ಟೇ ಸಮಾನರಾದ  ಕರಣಾನಿಧಿ ಅವರಿಗೆ ಜಾಗ ನೀಡಲು ನಿರಾಕರಿಸುವುದು ವಿರೋಧಿಸಿ ಡಿಎಂಕೆ ಹೈಕೋರ್ಟ್  ಮೆಟ್ಟಿಲೇರಿದ್ದಾರೆ. ಮಧ್ಯರಾತ್ರಿಯಲ್ಲಿಯೇ ವಿಚಾರಣೆ ನಡೆಸುವಂತೆ  ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com