ದೆಹಲಿಯ ವಿವೇಕ್ ವಿವಾರ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಶಾಲೆಯಲ್ಲಿ 4 ನೇ ತರಗತಿ ಓದುತ್ತಿದ್ದ ಬಾಲಕನಿಗೆ ಹಿರಿಯ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಷ್ಟೇ ಅಲ್ಲದೇ ಹಲ್ಲೆ ಮಾಡುತ್ತಿದ್ದರು. ಶಾಲಾ ವಾಹನದಲ್ಲಿ ಈ ಘಟನೆ ನಡೆದಿದ್ದು ಈ ವಿಷಯವನ್ನು ಶಿಕ್ಷಕರ ಗಮನಕ್ಕೆ ತರಲು ವಿದ್ಯಾರ್ಥಿ ದೂರು ನೀಡಿದ್ದಾನೆ. ಆದರೆ ವಿದ್ಯಾರ್ಥಿಯ ದೂರನ್ನು ಗಂಭೀರವಾಗಿ ಪರಿಗಣಿಸದ ಶಿಕ್ಷಕರು ನೀನು ತುಂಬಾ ಮುದ್ದಾಗಿದ್ದೀಯ ಅದಕ್ಕೆ ಯಾರು ಬೇಕಾದರೂ ಕೀಟಲೆ ಮಾಡುತ್ತಾರೆ ಎಂದಷ್ಟೇ ಹೇಳಿ ಸುಮ್ಮನಾಗಿದಾರೆ.