ಸಚಿವರ ರಾಜೀನಾಮೆಗಾಗಿ ಒತ್ತಡ ಹೆಚ್ಚಾಗುತ್ತಿದ್ದಂತೆ ನಿತೀಶ್ ಕುಮಾರ್ ತಮ್ಮನ್ನು ಭೇಟಿ ಮಾಡಲು ಸಚಿವರಿಗೆ ಸೂಚಿಸಿದ್ದರು. ಭೇಟಿ ವೇಳೆ ರಾಜೀನಾಮೆ ನೀಡುವಂತೆ ನಿತೀಶ್ ಕುಮಾರ್ ಸೂಚನೆಯ ಹಿನ್ನೆಲೆಯಲ್ಲಿ ಮಂಜು ವರ್ಮಾ ರಾಜೀನಾಮೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮಂಜು ವರ್ಮಾ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದ ನಿತೀಶ್ ಕುಮಾರ್, ಪ್ರಕರಣದಲ್ಲಿ ಸಚಿವರ ಪಾತ್ರ ಇರುವುದಕ್ಕೆ ಪುರಾವೆ ದೊರೆತ ತಕ್ಷಣ ಅವರು ರಾಜೀನಾಮೆ ನೀಡಲಿದ್ದಾರೆ ಎಂದಿದ್ದರು.