ಅಣ್ಣಾದೊರೈ, ಎಂಜಿಆರ್ ಹಾಗೂ ಜಯಲಲಿತಾ ಸಮಾಧಿಗಳು ಇರುವ ರಾಜಧಾನಿ ಚೆನ್ನೈನ ಮರೀನಾ ಬೀಚ್ ನಲ್ಲಿ ಅಣ್ಣಾದೊರೈ ಸ್ಮಾರಕದ ಪಕ್ಕದಲ್ಲಿಯೇ ಕರುಣಾನಿಧಿಯವರನ್ನು ಮಣ್ಣು ಮಾಡಬೇಕೆಂದು ಡಿಎಂಕೆ ಪಟ್ಟು ಹಿಡಿದಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಹಾಗೂ ಕಾನೂನು ತೊಡಕು ಮುಂದೊಡ್ಡಿ ಮುಖ್ಯಮಂತ್ರಿ ಇ. ಪಳನಿಸ್ವಾಮಿಯವರು ಇದನ್ನು ನಿರಾಕರಿಸಿದ್ದರು.