ಕರುಣಾನಿಧಿಗೆ ಅಂತಿಮ ಗೌರವ ಸಲ್ಲಿಸಿದ ಮಮತಾ, ರಜನಿಕಾಂತ್

ಡಿಎಂಕೆ ವರಿಷ್ಠ , ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಗೋಪಾಲಪುರಂನಲ್ಲಿನ ಅವರ ನಿವಾಸದ ಎದುರು ಕುಟುಂಬ ಸದಸ್ಯರು ಹಾಗೂ ಬಂಧುಗಳ ಅಂತಿಮ ದರ್ಶನಕ್ಕೆ ಇಡಲಾಗಿದೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on

ಚನ್ನೈ : ಡಿಎಂಕೆ ವರಿಷ್ಠ , ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಗೋಪಾಲಪುರಂನಲ್ಲಿನ ಅವರ ನಿವಾಸದ ಎದುರು ಕುಟುಂಬ ಸದಸ್ಯರು ಹಾಗೂ ಬಂಧುಗಳ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಗೋಪಾಲಪುರಂ ನಿವಾಸಕ್ಕೆ ಆಗಮಿಸುತ್ತಿರುವ ಕುಟುಂಬ ಸದಸ್ಯರು ಹಾಗೂ ಬಂಧುಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಅನೇಕ ರಾಜಕೀಯ ಗಣ್ಯರು ಭೇಟಿ ನೀಡುತ್ತಿದ್ದು, ಕರುಣಾನಿಧಿ ಅವರ  ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿ  ಕರುಣಾನಿಧಿಗೆ ಅಂತಿಮ ಗೌರವ ಸಲ್ಲಿಸಿದರು.

ಕರುಣಾನಿಧಿ ಅವರ ಪುತ್ರ  ಹಾಗೂ ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ಹಾಗೂ ಕರುಣಾನಿಧಿ ಅವರ ಪುತ್ರಿ ಕನ್ನಿಮೋಳಿ ಅವರಿಗೆ  ಮಮತಾ ಬ್ಯಾನರ್ಜಿ ಸಾಂತ್ವನ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com