ಐದು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಕರುಣಾನಿಧಿ ಅವರು 13 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಅವರು ಯಾವತ್ತೂ ಸಂಸದರಾಗಿ ಆಯ್ಕೆಯಾಗಿರಲಿಲ್ಲ. ಅಲ್ಲದೆ 50 ವರ್ಷಗಳ ಕಾಲ ಪ್ರಾದೇಶಿಕ ಪಕ್ಷ ಡಿಎಂಕೆ ಚುಕ್ಕಾಣಿಯನ್ನು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಸಂಸದರಾಗದೇ ಇದ್ದ ಮಾಜಿ ಸಿಎಂಗೆ ಗೌರವ ಸಲ್ಲಿಸಿ ಸಂಸತ್ ಕಲಾಪ ಮುಂದೂಡಲಾಗಿದೆ.