ಜಮ್ಮು ಕಾಶ್ಮೀರ: ಹುತಾತ್ಮ ಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ

ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸುವ ವೇಳೆ ಹುತಾತ್ಮರಾದ ...
ಹುತಾತ್ಮ ಯೋಧರಿಗೆ ಗೌರವ ನಮವ
ಹುತಾತ್ಮ ಯೋಧರಿಗೆ ಗೌರವ ನಮವ
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸುವ ವೇಳೆ  ಹುತಾತ್ಮರಾದ ಮೇಜರ್ ಸೇರಿದಂತೆ ನಾಲ್ವರು ಭಾರತೀಯ ಯೋಧರಿಗೆ  ಸೇನಾ ಪಡೆ ಅಂತಿಮ ನಮನ ಸಲ್ಲಿಸಿದೆ.
ಆಗಸ್ಟ್ 7 ರಂದು ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿತ್ತು. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದರು. 
ಮೇಜರ್ ಕೌಸ್ತುಬ್ ರಾಣೆ,  ಹಮೀರ್ ಸಿಂಗ್, ಮಂದೀಪ್ ಸಿಂಗ್ ರಾವತ್, ಮತ್ತು ವಿಕ್ರಮ್ ಜೀತ್ ಸಿಂಗ್ ಹುತಾತ್ಮರಾಗಿದ್ದರು, ಬುಲೆಟ್ ಗುಂಡುಗಳಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಹುತಾತ್ಮ ಯೋಧರಿಗೆ ಸೇನೆ ಸಂಪೂರ್ಣ ಗೌರವ ವಂದನೆ ಸಲ್ಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com