ನವದೆಹಲಿ: ಕರುಣಾನಿಧಿಯವರ ಸಾವಿಗೆ ಸಂತಾಪ ಸೂಚಿಸಿರುವ ಕೇಂದ್ರ ಸರ್ಕಾರ, ಅಗಲಿದ ಹಿರಿಯ ಮುಖಂಡನಿಗೆ ರಾಷ್ಟ್ರೀಯ ಗೌರವ ಸಲ್ಲಿಸಲು ಇಂದು ರಾಷ್ಟ್ರೀಯ ಶೋಕಾಚರಣೆಗೆ ಆದೇಶಿಸಿದೆ.
ಈ ಪ್ರಯುಕ್ತ ಬುಧವಾರ ದೇಶಾದ್ಯಂತ ರಾಷ್ಟ್ರ ಧ್ವಜವನ್ನು ಅರ್ಧ ಮಾತ್ರ ಹಾರಿಸಲಾಗುತ್ತದೆ. ಈ ಸಂಬಂಧ ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಅಧಿಕೃತ ಆದೇಶ ಹೊರಡಿಸಿದೆ. ದೆಹಲಿ ಸೇರಿದಂತೆ ಎಲ್ಲಾ ರಾಜ್ಯಗಳಲ್ಲೂ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಆದೇಶಿಸಲಾಗಿದೆ.
ಕರುಣಾನಿಧಿ ನಿಧನ ಹಿನ್ನೆಲೆಯಲ್ಲಿ ಚೆನ್ನೈನಲ್ಲಿನ ಪೆಟ್ರೋಲ್ ಪಂಪ್ ಗಳು ಇಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೂ ಮುಚ್ಚಲು ನಿರ್ಧರಿಸಲಾಗಿದೆ.
Advertisement