ಇನ್ನು ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನಲೆಯಲ್ಲಿ ಇಂದು ಸಿಎಂ ಪಿಣರಾಯಿ ವಿಜಯನ್ ಅಧಿಕಾರಿಗಳ ತುರ್ತು ಸಭೆ ಕರೆದು ಮಾಹಿತಿ ಸಂಗ್ರಹಿಸಿದರು. ಬಳಿಕ ಮಾತನಾಡಿದ ಅವರು, ಪ್ರಸ್ತುತ ಕೇರಳದಲ್ಲಿ ಪರಿಸ್ಥಿತಿ ಕೊಂಚ ವ್ಯತಿರಿಕ್ತವಾಗಿದೆ. ಆದರೂ ಸರ್ಕಾರ ಸೂಕ್ತ ಕ್ರಮಗಳನ್ನು ಕೊಗೊಳ್ಳಲಿದೆ. ಸಂಭಾವ್ಯ ಪ್ರವಾಹ ಪರಿಸ್ಛಿತಿ ನಿಭಾಯಿಸಲು ಸರ್ಕಾರ ಸಿದ್ಧವಾಗಿದ್ದು, ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಕೇಂದ್ರೀಯ ಪ್ರಕೃತಿ ವಿಕೋಪ ಸಿಬ್ಬಂದಿಗಳನ್ನು ಮತ್ತು ಅಗತ್ಯ ಪರಿಕರಗಳನ್ನು ರವಾನಿಸುವಂತೆ ಕೇಳಿಕೊಳ್ಳಲಾಗಿದೆ. ಈಗಾಗಲೇ 3 ಎನ್ ಡಿಆರ್ ಎಫ್ ತಂಡ ಕೇರಳಕ್ಕೆ ಆಗಮಿಸಿದ್ದು, ಇದಲ್ಲದೆ ಇತರೆ ಎರಡು ತಂಡ ಶೀಘ್ರ ಕೇರಳಕ್ಕೆ ಆಗಮಿಸಲಿದೆ. ರಾಜ್ಯದ 6 ತಂಡಗಳು ಈಗಾಗಲೇ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಹೇಳಿದರು.