ಸ್ವಾತಂತ್ರ್ಯೋತ್ಸವಕ್ಕೆ ಉಗ್ರರ ಕರಿನೆರಳು: ದೆಹಲಿಯಲ್ಲಿ ಇಬ್ಬರ ಬಂಧನ

ಸ್ವಾತಂತ್ರ್ಯೋತ್ಸವ ದಿನಾಚರಣೆ ವೇಳೆ ರಾಷ್ಟ್ರ ರಾಜಧಾನಿ ದೆಹಲಿಗೆ ಉಗ್ರರ ಕರಿನೆರಳು ಚಾಚಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಸ್ವಾತಂತ್ರ್ಯೋತ್ಸವ ದಿನಾಚರಣೆ ವೇಳೆ ರಾಷ್ಟ್ರ ರಾಜಧಾನಿ ದೆಹಲಿಗೆ ಉಗ್ರರ ಕರಿನೆರಳು ಚಾಚಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಬ್ಬರು ಶಂಕಿತ ಅಕ್ರಮ ಶಸ್ತ್ರಾಸ್ತ್ರ ಮಾರಾಟಗಾರರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಪಶ್ಚಿಮ ಬಂಗಾಳದ ಮಾಲ್ಡಾ ನಿವಾಸಿ ಮೊಹಮ್ಮದ್ ಅಜಿಮ್ ಹಾಗೂ ಉತ್ತರ ಪ್ರದೇಶ ಶ್ಯಾಮ್ಲಿ ನಿವಾಸಿ ಆಸ್ ಮೊಹಮ್ಮದ್ ಎಂದು ಗುರುತಿಸಲಾಗಿದೆ ಎಂದು ದೆಹಲಿ ಉಪ ಪೊಲೀಸ್ ಆಯುಕ್ತ ಸಂಜೀವ್ ಕುಮಾರ್ ಅವರು ತಿಳಿಸಿದ್ದಾರೆ.
ಆಸ್ ಮೊಹಮ್ಮದ್ ನನ್ನು ನಿನ್ನೆ ಬಂಧಿಸಲಾಗಿದ್ದು, ಅಜಿಮ್ ನನ್ನು ಕಳೆದ ವಾರ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬಂಧಿತ ಆರೋಪಿಗಳಿಂದ ಎರಡು ಕಾರ್ಬೈನ್ ಹಾಗೂ 50 ಪಿಸ್ತೂಲ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆರೋಪಿಗಳು ಕಳೆದ ನಾಲ್ಕು ವರ್ಷಗಳಿಂದ ದೆಹಲಿ ಮೂಲದ ಕ್ರಿಮಿನಲ್ ಗಳಿಗೆ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು ಎಂದು ಸಂಜೀವ್ ಕುಮಾರ್ ಹೇಳಿದ್ದಾರೆ.
ಸ್ವಾತಂತ್ರ್ಯೋತ್ಸವಕ್ಕೆ ಉಗ್ರರ ಕರಿನೆರಳು ಚಾಚಿರುವುದರಿಂದ ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com