ರಾಜ್ಯಸಭೆ ಸಭಾಪತಿಯಾಗಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದರು. ಬಳಿಕ ಮತಕ್ಕೆ ಹಾಕಿದರು. ಸದಸ್ಯರು ತಾವು ಕುಳಿತ ಆಸನದ ಮುಂದಿದ್ದ ಗುಂಡಿಗಳನ್ನು ಒತ್ತುವ ಮೂಲಕ ಮತ ಚಲಾಯಿಸಿದರು. ಇದರಂತೆ ಒಟ್ಟು 202 ಮತಗಳು ಚಲಾವಣೆಯಾದವು. ಡಿಜಿಟಲ್ ಡಿಸ್ಪ್ಲೇ ಮೂಲಕ ಬಂದ ಮತಗಳಿಗೂ ಹಾಜರಿದ್ದ ಸದಸ್ಯರ ಸಂಖ್ಯೆಗೆ ತಾಳೆಯಾಗದ ಕಾರಣ ಸಭಾಧ್ಯಕ್ಷರು ಮತ್ತೊಮ್ಮೆ ಮತಕ್ಕೆ ಹಾಕಿ, ಗುಂಡಿ ಒತ್ತುವಂತೆ ಸೂಜಿಸಿದರು. 2ನೇ ಬಾರಿಗೆ 222 ಮತಗಳು ಚಲಾವಣೆಯಾದವು.