ಇಂದು ರಾಜ್ಯಸಭೆಯಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಾಮಾಜಿಕ ನ್ಯಾಯ ಸಚಿವ ತಾವರ್ ಚಂದ್ ಗೆಹ್ಲೋಟ್ ಅವರು, ನರೇಂದ್ರ ಮೋದಿ ಸರ್ಕಾರ ದಲಿತ ಕಲ್ಯಾಣಕ್ಕೆ ಮತ್ತು ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದರು. ಅಲ್ಲದೆ ಯಾವುದೇ ಒತ್ತಡಕ್ಕೆ ಮಣಿದು ಈ ಮಸೂದೆಯನ್ನು ಮಂಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.