ಪತಿ ಇಮ್ತಿಯಾಜ್ ಉರ್ ರೆಹಮಾನ್ ಆಗಸ್ಟ್ 6ರಂದು ನಿವೇದಿತಾ ಘಟಕ್ ಶ್ರಾದ್ಧವನ್ನು ಚಿತ್ತರಂಜನ್ ಪಾರ್ಕ್ ಕಾಳಿ ಮಂದಿರ ಸೊಸೈಟಿಯಲ್ಲಿ ನೆರವೇರಿಸಲು ಸಮಯ ಕೇಳಿದ್ದರು. ಅದಕ್ಕೆ ಸೊಸೈಟಿ ಆಗಸ್ಟ್ 12ರಂದು ನಡೆಸಲು ಅವಕಾಶ ನೀಡಿ 1,300 ರುಪಾಯಿ ಹಣವನ್ನು ಕಟ್ಟಿಸಿಕೊಂಡಿದ್ದರು. ಆದರೆ ಇದೀಗ ತಾವು ಶ್ರಾದ್ಧವನ್ನು ಮಾಡುವುದಿಲ್ಲ ಎಂದು ಸೊಸೈಟಿ ಅವರು ಹೇಳಿದ್ದು ತಾವು ಕಟ್ಟಿದ್ದ ಹಣವನ್ನು ಹಿಂಪಡೆಯುವಂತೆ ತಿಳಿಸಿದ್ದಾರೆ ಎಂದು ಇಮ್ತಿಯಾಜ್ ತಿಳಿಸಿದ್ದಾರೆ.