ಕೇರಳದಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ರಾಜ್ಯದ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಂತೆಯೇ ವಿವಿಧ ಜಲಾಶಯಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಬಹುತೇಕ ಎಲ್ಲ ಜಲಾಶಯಗಳೂ ಭರ್ತಿಯಾಗಿವೆ. ಇದೇ ಕಾರಣಕ್ಕೆ ಇಡುಕ್ಕಿ, ಚೆರುಥೋಣಿ, ಮುಲ್ಲಾ ಪೆರಿಯಾರ್, ಮಲಂಪುಂಜಾ, ತೆನ್ಮಾಲಾ ಡ್ಯಾಂ ಸೇರಿದಂತೆ ಕೇರಳದ ಎಲ್ಲ 24 ಡ್ಯಾಂಗಳ ಗೇಟ್ ಗಳನ್ನು ತೆರೆದು ಅಪಾರ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.