ಕಾದು ನೋಡಿ, ಅಸ್ಸಾಂ ನಲ್ಲಿ ಅಕ್ರಮ ಬಾಂಗ್ಲಾದೇಶಿಗಳನ್ನು ಗುರಿತಿಸಿರುವಂತೆ ರೋಹಿಂಗ್ಯ ಮುಸ್ಲಿಮರನ್ನೂ ಸಹ ಗುರುತಿಸಿ ದೇಶದಿಂದ ಹೊರಗೆ ಕಳಿಸಲಾಗುತ್ತದೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ. ಇದೇ ವೇಳೆ ಜಮ್ಮು-ಕಾಶ್ಮೀರದ ಬಗ್ಗೆಯೂ ಮಾತನಾಡಿರುವ ಜಿತೇಂದ್ರ ಸಿಂಗ್ , ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ನ ಯಕರಿಗೆ ಜಮ್ಮು-ಕಾಶ್ಮೀರದಿಂದ ಹೊರ ಭಾಗದ ರಾಜ್ಯಗಳಿಂದ ತಮ್ಮ ಸೊಸೆಯಂದಿರನ್ನು ಕರೆತರುವುದಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ, ವರದಕ್ಷಿಣೆ, ಫ್ಲ್ಯಾಟ್ ಗಳನ್ನು ಪಡೆಯುವುದಕ್ಕೂ ಯಾವುದೇ ಸಮಸ್ಯೆ ಇರುವುದಿಲ್ಲ ಆದರೆ ತಮ್ಮದೇ ಹೆಣ್ಣುಮಕ್ಕಳನ್ನು ಬೇರೆಡೆಗೆ ಮದುವೆ ಮಾಡಿ ಕಳಿಸಬೇಕಾದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕನ್ನು ನಿರಾಕರಿಸುತ್ತಾರೆ.