ಎರ್ನಾಕುಲಂ, ಇಡುಕ್ಕಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವ ರಾಜನಾಥ್ ಸಿಂಗ್, ರಾಜ್ಯದ ಜನತೆ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಪ್ರವಾಹ ಪೀಡಿತ ರಾಜ್ಯಕ್ಕೆ ಕೇಂದ್ರದಿಂದ ಎಲ್ಲಾ ರೀತಿಯ ನೆರವನ್ನೂ ನೀಡಲಾಗುವುದು ಎಂದು ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪ್ರವಾಹದಲ್ಲಿ ನೆಲೆ ಕಳೆದುಕೊಂಡವರ ಸಮಸ್ಯೆಗಳನ್ನೂ ಇದೇ ವೇಳೆ ರಾಜನಾಥ್ ಸಿಂಗ್ ಆಲಿಸಿದ್ದಾರೆ.