ನವದೆಹಲಿ: ನೊಬೆಲ್ ಸಾಹಿತ್ಯ ಪ್ರಶಸ್ತಿ ಲೇಖಕ ವಿ. ಎಸ್. ನೈಪಾಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರಮೋದಿ ಸೇರಿದಂತೆ ರಾಜಕೀಯ ಕ್ಷೇತ್ರದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಿ.ಎಸ್. ನೈಪಾಲ್ ಅವರ ನಿಧನದಿಂದಾಗಿ ವಿಶ್ವ ಸಾಹಿತ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮೋದಿ ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ವಸಾಹತುಶಾಹಿ, ಆದರ್ಶವಾದಿ, ಧರ್ಮ ಮತ್ತು ರಾಜಕೀಯ ವಿಚಾರಗಳಿಗೆ ಸಂಬಂಧಿಸಿದ ವಿಮರ್ಶಾತ್ಮಕ ವ್ಯಾಖ್ಯಾನಗಳಿಂದ ನೈಪಾಲ್ ಹೆಸರುವಾಸಿಯಾಗಿದ್ದರು. 85 ವರ್ಷದ ನೈಪಾಲ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
Advertisement