ರಾಖಿ, ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ: ಹಣಕಾಸು ಸಚಿವ

ರಕ್ಷಾ ಬಂಧನ, ಗಣೇಶ ಉತ್ಸವಗಳು ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಖಿ ಹಾಗೂ ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಭಾನುವಾರ ಹೇಳಿದ್ದಾರೆ...
ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್
ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್
Updated on
ನವದೆಹಲಿ: ರಕ್ಷಾ ಬಂಧನ, ಗಣೇಶ ಉತ್ಸವಗಳು ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಖಿ ಹಾಗೂ ಗಣೇಶ ಮೂರ್ತಿಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಭಾನುವಾರ ಹೇಳಿದ್ದಾರೆ. 
ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಕ್ಷಾ ಬಂಧನ ಹತ್ತಿರ ಬರುತ್ತಿದೆ. ಹೀಗಾಗಿ ರಾಖಿಗಳ ಮೇಲಿನ ಜಿಎಸ್'ಟಿ ಹಾಗೂ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಎಲ್ಲಾ ರೀತಿಯ ಮೂರ್ತಿಗಳು, ಕರಕುಶಲ ವಸ್ತುಗಳು, ಕೈಮಗ್ಗದ ಮೇಲಿನ ತೆರಿಗೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. 
ರಕ್ಷಾ ಬಂಧನ ಹಾಗೂ ಗಣೇಶ ಉತ್ಸವ ನಮ್ಮ ಪರಂಪರೆಯಾಗಿದೆ. ಇವೆಲ್ಲವನ್ನೂ ನಾವು ಬಹಳ ಗೌರವಯುತವಾಗಿ ನಡೆಸಿಕೊಂಡು ಹೋಗಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com