ಕಳೆದ ಫೆಬ್ರವರಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ದೆಹಲಿ ಸಿಎಂ, ಡಿಸಿಎಂ ಹಾಗೂ ಶಾಸಕರಾದ ಅಮಾನತುಲ್ಲಾ ಖಾನ್, ಪ್ರಕಾಶ್ ಜರ್ವಾಲ್, ನಿತಿನ್ ತ್ಯಾಗಿ, ರಿತುರಾಜ್ ಗೋವಿಂದ್, ಸಂಜೀವ್ ಜಾ, ಅಜಯ್ ದತ್, ರಾಜೇಶ್ ರಿಶಿ, ರಾಜೇಶ್ ಗುಪ್ತಾ, ಮದನ್ ಲಾಲ್, ಪ್ರವೀಣ್ ಕುಮಾರ್ ಮತ್ತು ದಿನೇಶ್ ಮೋಹಿನಿಯಾ ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.