ಈ ಕುರಿತಂತೆ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಸೋಮನಾಥ್ ಚಟರ್ಜಿಯವರು ಹೈಕೋರ್ಟ್ ನಲ್ಲಿ ಸುದೀರ್ಘ ಕಾಲ ಕಳೆದಿದ್ದರು. ಚಟರ್ಜಿಯವರ ಪಾರ್ಥೀವ ಶರೀರವನ್ನು ಬೆಲ್ಲೆ ವ್ಯೂ ಕ್ಲಿನಿಕ್ ನಿಂದ ಹೈಕೋರ್ಟ್'ಗೆ ತೆಗೆದುಕೊಂಡು ಹೋಗಲಾಗುತ್ತದೆ. ನ್ಯಾಯಾಲಯದಿಂದ ರಾಜ್ಯ ವಿಧಾನಸಭೆಗೆ ಕರೆದೊಯ್ದು ಅಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸಕಲ ಗೌರವಗಳನ್ನು ಸಲ್ಲಿಸಲಾಗುತ್ತದೆ.