ಇದರಂತೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಕೂಡ ಸಂತಾಪವನ್ನು ಸೂಚಿಸಿದ್ದು, ಲೋಸಸಭೆ ಮಾಜಿ ಸ್ಪೀಕರ್ ನಿಧನ ಸುದ್ದಿ ಬಹಳ ಬೇಸರವನ್ನುಂಟು ಮಾಡಿದೆ. ಸಂಸತ್ತಿನಲ್ಲಿ ಅತ್ಯುತ್ತಮ ಸದಸ್ಯರಾಗಿದ್ದರು. ಲೋಕಸಭೆಗೆ 10 ಬಾರಿ ಆಯ್ಕೆಯಾಗಿ ಬಂದಿದ್ದರು. ಸದಾಕಾಲ ಜನರ ಸಂಕಷ್ಟಗಳನ್ನು ಎಲ್ಲರ ಗಮನಕ್ಕೆ ತರುತ್ತಿದ್ದರು. ತಾವು ನಂಬಿದ್ದ ತತ್ವಗಳಿಗೆ ದೃಢವಾಗಿ ನಿಲ್ಲುತ್ತಿದ್ದರು ಎಂದು ತಿಳಿಸಿದ್ದಾರೆ.