ಕರುಣಾನಿಧಿಗಾಗಿ ದಕ್ಷಿಣ ಭಾರತದ ಕಲಾವಿದರ ಸಂಘ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಪಳನಿಸ್ವಾಮಿ ಹಾಗೂ ಅವರ ಇಡೀ ಸಂಪುಟ ಕರುಣಾನಿಧಿಯವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಬೇಕಿತ್ತು. ಮರೀನಾ ಬೀಚ್ ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸ್ಥಳ ನೀಡುವ ಕುರಿತಂತೆ ಕೆಲ ಪರ ಹಾಗೂ ವಿರೋಧದ ಕೂಗುಗಳು ಕೇಳಿ ಬಂದಿದ್ದವು. ಅಂತಿಮವಾಗಿ ಮದ್ರಾಸ್ ಹೈಕೋರ್ಟ್ ಆದೇಶದ ಮೂಲಕ ವಿವಾದಕ್ಕೆ ಅಂತ್ಯ ಹಾಡಿತ್ತು. ಒಂದು ವೇಳೆ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸರ್ಕಾರ ಪ್ರಶ್ನಿಸಿದ್ದೇ ಆಗಿದ್ದರೆ, ಸರ್ಕಾರದ ವಿರುದ್ಧ ನಾನು ಪ್ರತಿಭಟನೆ ನಡೆಸುತ್ತಿದ್ದೆ ಎಂದು ಹೇಳಿದ್ದಾರೆ.