ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಜರು ಬಲಿದಾನ ಮಾಡಿದ್ದಾರೆ. ಅವರ ತ್ಯಾಗ, ಬಲಿದಾನದಿಂದಾಗಿ ನಮಗೆ ಇಂದು ಸ್ವಾತಂತ್ರ್ಯ ಸಿಕ್ಕಿದೆ. ಹೀಗಾಗಿ ಅವರ ಬಲಿದಾನವನ್ನು ನಾವು ಸ್ಮರಿಸಿಕೊಳ್ಳುತ್ತಿದ್ದೇವೆ. ಪೂರ್ವಜರು ಹಾಕಿಕೊಟ್ಟ ಮಾರ್ಗದಲ್ಲಿ ಇಂದು ಸಾಗಬೇಕಿದೆ. ರಾಷ್ಟ್ರದ ಅಭಿವೃದ್ಧಿಗಾಗಿ ಎಲ್ಲರೂ ಪಣ ತೊಡಬೇಕಿದೆ. ದೇಶದಲ್ಲಿ ನಿರುದ್ಯೋಗ ತೊಲಗಿಸಿ, ಬಡತನ ನಿವಾರಣೆ ಆಗಬೇಕಿ ಎಂದರು.