'ಭಾರತ ಇಂದು ಅಭಿವೃದ್ಧಿಯ ನೆಲವಾಗಿದೆ. ಆರ್ಥಿಕ ಅಭಿವೃದ್ಧಿಯಲ್ಲಿ ನಾವು ಹೊಸ ಮನ್ವಂಥರವನ್ನೇ ಸಾಧಿಸಿದ್ದೇವೆ. ಈ ಹಿಂದೆ ಅವಕಾಶಗಳೇ ಇರದ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಇಂದು ಭಾರತವೂ ಸೇರಿದೆ. ಈ ಮೂಲಕ ದೇಶ ಅಭಿವೃದ್ಧಿಯ ವೇಗದಲ್ಲಿದೆ. 2013ರ ಅವಧಿಯಲ್ಲಿ ಇದ್ದ ವೇಗದಲ್ಲೇ ನಾವು ದೇಶವನ್ನು ನಡೆಸಿಕೊಂಡು ಹೋಗಿದ್ದರೆ, ಅಂದು ಶೌಚಾಲಯಗಳು ನಿರ್ಮಾಣವಾಗುತ್ತಿದ್ದ ವೇಗದಲ್ಲೇ ನಾವು ಮುಂದೆ ನಡೆದಿದ್ದರೆ, ಅಂದು ವಿದ್ಯುಚ್ಛಕ್ತಿಯನ್ನು ವಿಸ್ತರಿಸುತ್ತಿದ್ದ ವೇಗಲ್ಲೇ ನಾವು ಹೆಜ್ಜೆ ಹಾಕಿದ್ದರೆ ಭಾರತವನ್ನು ಅಭಿವೃದ್ಧಿ ಮಾಡಲು ಇನ್ನೂ ದಶಕಗಳು ಬೇಕಾಗಿತ್ತು. ದೇಶದ ಲಕ್ಷಾಂತರ ಗ್ರಾಮಗಳು ಇಂದಿಗೂ ಕಗ್ಗತ್ತಲೇ ಇರುತ್ತಿದ್ದವು ಎನ್ನುವ ಮೂಲಕ ಮೋದಿ ಅವರು ಹಿಂದಿನ ಯುಪಿಎ ಸರ್ಕಾರವನ್ನು ಪರೋಕ್ಷವಾಗಿ ಟೀಕಿಸಿದರು. ಅಲ್ಲದೆ, ಎನ್ ಡಿಎ ಸರ್ಕಾರದಲ್ಲಿ ಅಭಿವೃದ್ಧಿಯ ವೇಗ ಹೆಚ್ಚಿದೆ ಎಂದು ಪ್ರತಿಪಾದಿಸಿದರು.