ಇತ್ತ ಸಿಎಂ ಮನವಿಗೆ ಕೇರಳ ಚಿತ್ರರಂಗ ಸ್ಪಂದಿಸಿದ್ದು, ಮಲಯಾಳಂ ಚಿತ್ರರಂಗದ ಅಧ್ಯಕ್ಷ ಮೋಹನ್ ಲಾಲ್ ಅವರು ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂ ಹಣ ನೀಡಿದ್ದು, ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲು ಅರ್ಜುನ್ 25 ಲಕ್ಷ ಮತ್ತು ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ 5 ಲಕ್ಷ ರೂ ನೀಡಿದ್ದಾರೆ. ಅಂತೆಯೇ ದೇಶದ ವಿವಿಧ ಮೂಲೆಗಳಿಂದ ಸಿಎಂ ಪರಿಹಾರ ನಿಧಿಗೆ ವ್ಯಾಪಕ ಧನ ಸಹಾಯ ಹರಿದು ಬರುತ್ತಿದೆ.