ಕೇರಳದ ಮಲಪ್ಪುಳದ ವಲಿಯಕಾಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭೀಕರ ಪ್ರವಾಹದಿಂದಾಗಿ ವಲಿಯಕಾಡು ಗ್ರಾಮದ ಸುಮಾರು 100ಕ್ಕೂ ಅಧಿಕ ಗ್ರಾಮಸ್ಥರು ಅಪಾಯಕ್ಕೆ ಸಿಲುಕಿದ್ದರು. ಈ ವೇಳೆ ಇಲ್ಲಿ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಆಗಮಿಸಿದ ಸೈನಿಕರಿಗೆ ಗ್ರಾಮಸ್ಥರ ಇರುವಿಕೆ ತಿಳಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗ್ರಾಮಸ್ಥರನ್ನು ರಕ್ಷಿಸಲು ಪ್ರವಾಹದ ನೀರಿಗೆ ಅಡ್ಡಲಾಗಿ ಸ್ಥಳದಲ್ಲೇ ಸುಮಾರು 35 ಅಡಿ ಉದ್ದದ ಸೇತುವೆ ನಿರ್ಮಿಸಿದ ಸೈನಿಕರು ಅದರ ಮೂಲಕ ಒಬೊಬ್ಬರನ್ನಾಗಿ ಸುಮಾರು 100 ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ.