ಮಾಜಿ ಪ್ರಧಾನಿ ಮತ್ತು ಭಾರತರತ್ನ ಪುರಸ್ಕೃತ ವಾಜಪೇಯಿ ಅವರು ವಯೋ ಸಹಜ ಅನಾರೋಗ್ಯಕ್ಕೀಡಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಕ್ಷೀಣಿಸುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಅವರ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರ ಸಹೋದರ ಸಂಬಂಧಿ ಕಾಂತಿ ಮಿಶ್ರಾ ಅವರು, ವಾಜಪೇಯಿ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಹರಸಿದರು. ಅವರು ಬೇಗ ಗುಣಮುಖರಾಗಿ ಮನೆಗೆ ವಾಪಸ್ ಆಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರಿಂದ ನಾನು ಒಂದು ಭಾಷಣೆವನ್ನು ಕೇಳಬೇಕು ಎಂದೆನಿಸುತ್ತಿದೆ ಎಂದು ಕಾಂತಿ ಮಿಶ್ರಾ ಹೇಳಿದ್ದಾರೆ.