ಇದೇ ವೇಳೆ ಕೊಚ್ಚಿ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿದ ಪರಿಣಾಮ ಶನಿವಾರದವರೆಗೆ ಅಲ್ಲಿ ವಿಮಾನಗಳ ಸಂಚಾರ ನಿಷೇಧಿಸಲಾಗಿದೆ. ಇದಲ್ಲದೆ ರಾಜ್ಯದ ಹಲವು ರೈಲು ನಿಲ್ದಾಣಗಳಲ್ಲೂ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಸಾಮಾನ್ಯ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೀಗಾಗಿ ವಾಯುಪಡೆಗೆ ಸೇರಿದ ರನ್ ವೇಗಳಲ್ಲಿ ಸಣ್ಣ ವಿಮಾನಗಳನ್ನು ಇಳಿಸಲು ಅವಕಾಶ ಕೊಡುವಂತೆ ಕೇರಳ ಮುಖ್ಯಮಂತ್ರಿ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದಾರೆ.