ಕೇರಳ ರಾಜ್ಯವನ್ನು ಬಹುವಾಗಿ ಕಾಡುತ್ತಿರುವ ಮುಂಗಾರು ಮಳೆ ನಿನ್ನೆ ಕೂಡ ಒಂದೇ ದಿನದಲ್ಲಿ 29 ಮಂದಿಯನ್ನು ಬಲಿ ಪಡೆದುಕೊಂಡಿತ್ತು. ಇದರೊಂದಿಗೆ ಕಳೆದ ಕೆಲ ದಿನಗಳಲ್ಲಿ ಮುಂಗಾರು ಮಳೆಗೆ ಬಲಿಯಾದವರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.
ಭಾರೀ ಮಳೆಯ ಮತ್ತು ಪ್ರವಾಹದ ಪರಿಣಾಮ ರಾಜ್ಯಹ ಹಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ವೇಲೆ ಕೊಚ್ಚಿ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿದ ಪರಿಣಾಮ ಶನಿವಾರದವರೆಗೆ ಅಲ್ಲಿ ವಿಮಾನಗಳ ಸಂಚಾರ ನಿಷೇಧಿಸಲಾಗಿದೆ. ಇದಲ್ಲದೆ ರಾಜ್ಯದ ಹಲವು ರೈಲು ನಿಲ್ದಾಣಗಳಲ್ಲೂ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಸಾಮಾನ್ಯ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೀಗಾಗಿ ವಾಯುಪಡೆಗೆ ಸೇರಿದ ರನ್ ವೇಗಳಲ್ಲಿ ಸಣ್ಣ ವಿಮಾನಗಳನ್ನು ಇಳಿಸಲು ಅವಕಾಶ ಕೊಡುವಂತೆ ಕೇರಳ ಮುಖ್ಯಮಂತ್ರಿ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದ 35 ಅಣೆಕಟ್ಟುಗಳು ಪೂರ್ಣವಾಗಿ ಭರ್ತಿಯಾಗಿದ್ದು, ಅವುಗಳಿಂದ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಪ್ರದೇಶ ಮತ್ತು ತಗ್ಗು ಪ್ರದೇಶಗಳ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸಂದೇಶ ರವಾನಿಸಲಾಗಿದೆ.