ಮಾಜಿ ಪ್ರಧಾನಿ ವಾಜಪೇಯಿಯವರನ್ನು 'ಗದ್ದಾರ್' ಎಂದಿದ್ದ ಸೋನಿಯಾ ಗಾಂಧಿ

ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಅಜಾತಶತ್ರು ಎನ್ನಲಾಗುತ್ತೆ. ಪಕ್ಷಾತೀತವಾಗಿ ವಾಜಪೇಯಿ ಅವರನ್ನು ಎಲ್ಲರೂ ಗೌರವಿಸುತ್ತಿದ್ದರು, ಅವರ ಹಲವು ವಿರೋಧಿಗಳು ಅವರನ್ನು Right Man in Wrong Party
ವಾಜಪೇಯಿ
ವಾಜಪೇಯಿ
ನವದೆಹಲಿ: ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಅಜಾತಶತ್ರು ಎನ್ನಲಾಗುತ್ತೆ. ಪಕ್ಷಾತೀತವಾಗಿ ವಾಜಪೇಯಿ ಅವರನ್ನು ಎಲ್ಲರೂ ಗೌರವಿಸುತ್ತಿದ್ದರು, ಅವರ ಹಲವು ವಿರೋಧಿಗಳು ಅವರನ್ನು Right Man in Wrong Party ಎನ್ನುತ್ತಿದ್ದರು. ಆದರೆ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಮಾತ್ರ ಅಟಲ್ ಬಿಹಾರಿ ವಾಜಪೇಯಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ದೇಶದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದರು. 
1999 ರಲ್ಲಿ ಉಜ್ಜೈನ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸೋನಿಯಾ ಗಾಂಧಿ ಅಂದಿನ ಪ್ರಧಾನಿ ವಾಜಪೇಯಿ ಅವರನ್ನು ಗದ್ದಾರ್ (ದೇಶದ್ರೋಹಿ) ಎಂದು ಹೇಳಿದ್ದರು. ಸೋನಿಯಾ ಗಾಂಧಿ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದ ಬಿಜೆಪಿ ಸೋನಿಯಾ ಗಾಂಧಿ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com