ನವದೆಹಲಿ: ಭೂತನ್ ದೊರೆ ಜಿಗ್ಮೆ ಖೇಸರ್ ನಾಮ್ಜಿಲ್ ವಾಂಗ್ಚಕ್ ಹಾಗೂ ಬಾಂಗ್ಲಾದೇಶ ವಿದೇಶಾಂಗ ಸಚಿವ ಅಬ್ದುಲ್ ಹಸನ್ ಮೊಹಮ್ಮದ್ ಆಲಿ ಮಾಜಿ ಪ್ರಧಾನಿ ಎ. ಬಿ. ವಾಜಪೇಯಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
ಶ್ರೀಲಂಕಾ ಹಂಗಾಮಿ ವಿದೇಶಾಂಗ ಸಚಿವ ಲಕ್ಷ್ಣಣ್ ಕಿರಿಲ್ಲಾ, ನೇಪಾಳ ವಿದೇಶಾಂಗ ಸಚಿವ ಪ್ರದೀಸ್ ಗ್ಯಾವಾಲಿ, ಪಾಕಿಸ್ತಾನದ ಹಂಗಾಮಿ ಮಾಹಿತಿ ಸಚಿವ ಸಯ್ಯದ್ ಝುಪರ್ ಆಲಿ ಮತ್ತು ಅಪ್ಘಾನಿಸ್ತಾನದ ಹಿರಿಯ ಸಚಿವರು ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಲು ಆಗಮಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ವಾಜಪೇಯಿ ಅವರ ಕೊಡುಗೆ ಇದೆ. ಬಾಂಗ್ಲಾದೇಶ ಜನರಿಗಾಗಿ ಸದೃಢ ಸಹಕಾರವನ್ನು ವಾಜಪೇಯಿ ನೀಡಿದ್ದಾರೆ ಎಂದು ಬಾಂಗ್ಲಾದೇಶ ವಿದೇಶಾಂಗ ಸಚಿವ ಅಬ್ದುಲ್ ಹಸನ್ ಮೊಹಮ್ಮದ್ ಆಲಿ ಹೇಳಿದ್ದಾರೆ.
Advertisement