ತಾವು ಸ್ವತಃ ಓರ್ವ ಬಾಣಸಿಗರಾಗಿದ್ದ ವಾಜಪೇಯಿ ಮನೆಗೆ ಆಗಮಿಸಿದವರಿಗೆ ತಮ್ಮ ಕೈಯಾರೆ ಅಡಿಗೆ ಮಾಡಿ ಬಡಿಸುತ್ತಿದ್ದರೆ. ಅಲ್ಲದೆ ಸಚಿವ ಸಂಪುಟ ಸಭೆ ನಡೆವ ವೇಳೆ ಹುರಿದ ಕಡಲೆಕಾಳು, ತಿನ್ನುವುದು ಇವರ ಖಯಾಲಿಯಾಗಿತ್ತು. ಆಲೂ ಚಿಪ್ಸ್, ಕಬಾಬ್, ಸಿಗಡಿ ಮೀನಿನ ಖಾದ್ಯ ಹೀಗೆ ನಾನಾ ವಿಧದ ಭಕ್ಷ್ಯಗಳನ್ನು ವಾಜಪೇಯಿ ಸವಿದಿದ್ದರು. ವೆಂಕಯ್ಯ ನಾಯ್ಡು, ಲಾಲ್ ಜೀ ಟಂಡನ್ ಹೀಗೆ ನಾನಾ ಮುಖಂಡ್ರು ವಾಜಪೇಯಿಯವರನ್ನು ಭೇಟಿಯಾಗುವುದಕ್ಕೆ ಹೊರಟಾಗ ಸಹ ಅವರಿಗಿಷ್ಟವಾದ ಖಾದ್ಯಗಳನ್ನು ಜತೆಗೆ ಒಯ್ಯುತ್ತಿದ್ದರು.