ನಿರಾಶ್ರಿತರಿಗಾಗಿ ಕ್ಯಾಂಪ್ ಗಳನ್ನು ತೆರೆಯಲಾಗಿದ್ದು ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆಗೆ ಭಾರತೀಯ ಸೇನೆ ಹಾಗೂ ತುರ್ತು ನಿರ್ವಹಣ ಸಿಬ್ಬಂದಿಗಳು ಸಕ್ರಿಯರಾಗಿದ್ದಾರೆ. ಇನ್ನು ನಿರಾಶ್ರಿತರ ಕ್ಯಾಂಪ್ ಗೆ ನೆರೆ ರಾಜ್ಯಗಳಿಂದ ಆಹಾರ, ಸರಂಜಾಮುಗಳು ಬರುತ್ತಿದೆ. ಇನ್ನು ಇಬ್ಬರು ಐಎಎಸ್ ಅಧಿಕಾರಿಗಳು ತಮ್ಮ ಹೆಗಲ ಮೇಲೆ ಸಾಮಗ್ರಿಗಳನ್ನು ಹೊತ್ತು ನಿರಾಶ್ರಿತ ಕ್ಯಾಂಪ್ ನಲ್ಲಿ ಶೇಖರಿಸುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿದೆ.