ಜೆಎನ್ ಯು ವಿದ್ಯಾರ್ಥಿ ಸಂಘಟನೆ ನಾಯಕ ಉಮರ್ ಖಾಲೀದ್ ಮೇಲೆ ದಾಳಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದು, ದಾಳಿಯ ಹೊಣೆ ಹೊತ್ತಿದ್ದಾರೆ.
"ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಗಿಫ್ಟ್ ನೀಡಬೇಕಿತ್ತು ಈ ಹಿನ್ನೆಲೆಯಲ್ಲಿ ದಾಳಿ ನಡೆಸಲು ಯೋಜನೆ ರೂಪಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಹೇಳಿರುವುದು ಕಂಡುಬಂದಿದೆ. ದಾಳಿಯ ಹೊಣೆ ಹೊತ್ತಿರುವ ಇಬ್ಬರು ವ್ಯಕ್ತಿಗಳು ನಾಳೆ ಪೊಲೀಸರೆದುರು ಶರಣಾಗುವುದಾಗಿ ಹೇಳಿದ್ದಾರೆ.
ಹೊಣೆ ಹೊತ್ತಿರುವ ಇಬ್ಬರನ್ನು ದರ್ವೇಶ್ ಶಾಪುರ್, ನವೀನ್ ದಲಾಲ್ ಎಂದು ಗುರುತಿಸಲಾಗಿದ್ದು, ಪೊಲೀಸರು ವಿಡಿಯೋದಲ್ಲಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.